https://youtu.be/k1_7-9fPNAc?si=lR5DS7vUBluxRmbB
ಶಿವಮೊಗ್ಗದಲ್ಲಿಂದು ಕಾಂಗ್ರೆಸ್ ಹಬ್ಬ, ಲೋಕಸಭಾ ಚುನಾವಣೆಗೆ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆಯ ಸಂಭ್ರಮದ ತುಣುಕು ವೀಡಿಯೋ ಚಿತ್ರ ನೋಡಿ
Spo: Tungataranga daily
ಶಿವಮೊಗ್ಗ,ಏ.15:
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದು ಅಪಾರ ಬೆಂಬಲಿಗರೊಂದಿಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಟ ಶಿವರಾಜ್ ಕುಮಾರ್, ಮಂಜುನಾಥ್ ಭಂಡಾರಿ, ಕಿಮ್ಮನೆ ರತ್ನಾಕರ್, ಸಿದ್ಧಲಿಂಗಯ್ಯ ಇದ್ದರು.
ಬಳಿಕ ಅವರು ಗಾಂಧಿ ಬಜಾರ್ ನಿಂದ ಮತ್ತೆ ಮೆರವಣಿಗೆಯಲ್ಲಿ ಪಾಲ್ಗೊಂಡು ಶಿವಪ್ಪನಾಯಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ಗೋಫಿ ವೃತ್ತದ ಮೂಲಕ ಜಿಲ್ಲಾಧಿಕಾರಿಗಳಿಗೆ ಕಚೇರಿಗೆ ಬಂದು ಅಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಬಳಿಕ ಎರಡನೇ ಸೆಟ್ ನಾಮಪತ್ರ ಸಲ್ಲಿಸಿದರು.
ಮೆರವಣಿಗೆಯುದ್ಧಕ್ಕೂ ಹಲವು ಕಡೆ ಬೃಹತ್ ಪ್ರಮಾಣದ ಸೇಬು, ಹೂವಿನ ಹಾರಗಳನ್ನು ಗೀತಾ ಶಿವರಾಜ್ ಕುಮಾರ್ ಅವರಿಗೆ ಹಾಕಿ ಶುಭ ಕೋರಲಾಯಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವು.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ಕಾಂಗ್ರೆಸ್ ಕಾರ್ಯರ್ತರಿಗೆ ಅಲ್ಲಲ್ಲಿ ಮಜ್ಜಿಗೆ ನೀರು ಮತ್ತು ಪಾನಕದ ವ್ಯವಸ್ಥೆ ಮಾಡಲಾಗಿತ್ತು. ಬೃಹತ್ ಎರಡು ಎಲ್ಇಡಿ ಪರದೆಯ ಮೇಲೆ ಗೀತಾ ಶಿವರಾಜ್ ಕುಮಾರ್ ಅವರ ಪ್ರಚಾರದ ದೃಶ್ಯಾವಳಿಗಳನ್ನು ಮತ್ತು ಕಾಂಗ್ರೆಸ್ ಪಕ್ಷದ ೫ ಗ್ಯಾರಂಟಿಗಳ ಪ್ರಾತ್ಯಕ್ಷಿಕೆ ತೋರಿಸಲಾಯಿತು.
ಗಾಂಧಿ ಬಜಾರ್ ನಲ್ಲಿ ಒಂದು ಎಲ್ಇಡಿ ಮುರಿದು ಬಿದ್ದು ಇಬ್ಬರಿಗೆ ಗಾಯವಾದ ಘಟನೆಯೂ ನಡೆಯಿತು. ಕಾಂಗ್ರೆಸ್ ಕಾರ್ಯಕರ್ತರು, ಶಿವರಾಜ್ ಕುಮಾರ್ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಬಂಗಾರಪ್ಪ, ಕಾಂಗ್ರೆಸ್ ಪಕ್ಷ, ಶಿವಣ್ಣ, ಗೀತಾ ಅವರ ಪರವಾಗಿ ಘೋಷಣೆ ಕೂಗಿದರು.
ಜನಸಾಗರದ ನಡುವೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಮಧು ಬಂಗಾರಪ್ಪ, ಮಂಜುನಾಥ ಭಂಡಾರಿ, ಆಯನೂರು, ಕಿಮ್ಮನೆ ರತ್ನಾಕರ್, ಬೇಳೂರು ಗೋಪಾಲ ಕೃಷ್ಣ, ಸಂಗಮೇಶ್, ವಿನಯ್ ಕುಮಾರ್ ಸೊರಕೆ, ಆರ್. ಪ್ರಸನ್ನಕುಮಾರ್, ಹೆಚ್.ಎಸ್. ಸುಂದರೇಶ್, ಎಂ. ಶ್ರೀಕಾಂತ್, ಜಿ.ಡಿ. ಮಂಜುನಾಥ್, ಕಾಶಿ ವಿಶ್ವನಾಥ್, ಹೆಚ್.ಸಿ. ಯೋಗೀಶ್, ರೇಖಾ ರಂಗನಾಥ್, ಬಲ್ಕಿಶ್ ಬಾನು, ಕಲೀಂ ಪಾಷಾ, ಮರಿಯಪ್ಪ, ಶಿಜು ಪಾಶಾ, ಪದ್ಮನಾಬ್ ಮೊದಲಾದವರಿದ್ದರು.