ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಓಲೈಕೆ ಅವರ ಚಿಂತನೆ ಒಬಿಸಿ ವರ್ಗಕ್ಕೆ ಅನ್ಯಾಯ ಮಾಡ್ತಿದೆ. ಮೋದಿ ಜನಪ್ರಿಯತೆ ದಿನೇ ದಿನೇ ಹೆಚ್ಚಾಗ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ೧೪ ಕ್ಷೇತ್ರಗಳ ಚುನಾವಣೆ ನಿರೀಕ್ಷೆಗೆ ಮೀರಿ ಚೆನ್ನಾಗಿ ಆಗಿದೆ. ನಾಳೆ ದಾವಣಗೆರೆ ಹೊಸಪೇಟೆಯಲ್ಲಿ ಮೋದಿ ಪ್ರಚಾರ ನಡೆಸ್ತಾರೆ. ಕಾಂಗ್ರೆಸ್ ಪಕ್ಷದವರಿಗೆ ವಿಜಯೇಂದ್ರ ಅವರಿಗೆ ತಲೆಕೆಟ್ಟಿದೆ ಅನಿಸಬಹುದು ನಿನ್ನೆ ನಡೆದ ಮತದಾನದಲ್ಲಿ ೧೪ ಕ್ಕೆ ೧೪ ಸ್ಥಾನ ಗೆಲ್ಲುತ್ತೇವೆ. ಮತದಾನಕ್ಕೆ ಉತ್ಸಾಹ ಇನ್ನು ಹೆಚ್ಚಾಗಬೇಕಿತ್ತು. ಬಿಸಿಲಿನಲ್ಲೂ ಮತದಾನ ಚೆನ್ನಾಗಿ ಆಗಿದೆ ಎಂದರು.
ರಾಹುಲ್ ಗಾಂಧಿ ಅಮೇಥಿ ಜನರ ವಿಶ್ವಾಸ ಕಳೆದುಕೊಂಡು ವೈಯನಾಡಿನಲ್ಲಿ ಅಡಗಿ ಕುಳಿತಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿಗೆ ಏಕೆ ಇಂತಹ ಪರಿಸ್ಥಿತಿ ಬಂದಿದೆ. ಅಮೇಥಿ ಮತದಾರರು ಏಕೆ ರಾಹುಲ್ ಗಾಂಧಿ ಧಿಕ್ಕರಿಸಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ರಾಹುಲ್ ಗಾಂಧಿ ರಾಜ್ಯಕ್ಕೆ ಹೆಚ್ಚೆಚ್ಚು ಕರೆಸಬೇಕು. ಶಿವಮೊಗ್ಗದಲ್ಲಿ ಎರಡೂವರೆ ಮೂರು ಲಕ್ಷ ಅಂತರದಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ರಾಹುಲ್ ಗಾಂಧಿ ಭೇಟಿ ಬಳಿಕ ಮತ್ತೆ ೫೦ ಸಾವಿರ ಲೀಡ್ ಹೆಚ್ಚಲಿದೆ ಎಂದರು.
ರಾಜ್ಯದಲ್ಲಿ ಪೆನ್ ಡ್ರೈವ್ ಹೆಚ್ಚು ಸದ್ದು ವಿಚಾರದ ಬಗ್ಗೆ ನಾನು ಮಾತನಾಡಲ್ಲ ಎಂದ ವಿಜಯೇಂದ್ರ, ಗ್ಯಾರಂಟಿ ಯೋಜನೆ ಮತದಾರರ ಮೇಲೆ ಪರಿಣಾಮ ಬೀರಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರದ ಅಮಲಿನಲ್ಲಿದೆ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಕಾಂಗ್ರೆಸ್ ಬೆಲೆ ತೆರಬೇಕಾಗುತ್ತದೆ. ಕಾಂಗ್ರೆಸ್ ಗೆ ಜನ ಬುದ್ದಿ ಕಲಿಸುತ್ತಾರೆ. ಮೊದಲ ಹಂತದ ವಾತಾವರಣ ಎರಡನೇ ಹಂತದಲ್ಲೂ ಕಾಣ್ತಿದೆ. ರಾಜ್ಯದಲ್ಲಿ ಹೊಸ ದಾಖಲೆ ನಿರ್ಮಾಣ ಮಾಡ್ತೇವೆ ಎಂದರು. ಈಶ್ವರಪ್ಪ ಆರೋಪಗಳಿಗೂ ಉತ್ತರಿಸಲು ವಿಜಯೇಂದ್ರ ನಿರಾಕರಿಸಿದರು.