ಶಿವಮೊಗ್ಗ, ಏಪ್ರಿಲ್ ೩೦: ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಮೇ. ೦೨ ರಂದು ಬೆಳಗ್ಗೆ ೯.೦೦ ರಿಂದ ಸಂಜೆ ೬.೦೦ರವರೆಗೆ ನಗರದ ಗಾಂಧಿಬಜಾರ್,
ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ,
ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂ.ಕೆ.ಕೆ ರಸ್ತೆ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.