ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಅವರು ಐಎಎಸ್ ಕೇಡರ್ಗೆ ಪದೋನ್ನತಿ ಹೊಂದಿದ್ದಾರೆ.
ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಧಿಕೃತ ಪಟ್ಟಿ ಪ್ರಕಟಿಸಿದೆ.
ಶಿವಮೊಗ್ಗ ಡಯೆಟ್ನಲ್ಲಿ ವಿದ್ಯಾಭ್ಯಾಸ ಮಾಡಿರುವ ವೈಶಾಲಿ ಅವರು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರದವರು. ಉಪನ್ಯಾಸಕಿಯಾಗಿ ಸರಕಾರಿ ಸೇವೆಗೆ ಸೇರಿದ್ದ ವೈಶಾಲಿ ಅವರು ಕೆ.ಎ.ಎಸ್ ಪಾಸಾಗಿ ನಾಗರಿಕಸೇವೆಗೆ ಬಂದಿದ್ದರು. ಶಿವಮೊಗ್ಗದಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿದ್ದ ಅವರು ಬಳಿಕ ಚಿಕ್ಕಮಗಳೂರು ಎಡಿಸಿಯಾಗಿ ಕಾರ್ಯನಿರ್ವಹಿಸಿದ್ದರು. .ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅವರನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಿಸಿಕೊಳ್ಳಲಾಗಿತ್ತು.
ವೈಶಾಲಿ ಅವರಿಗೆ ಐಎಎಸ್ಗೆ ಪದೋನ್ನತಿ ಸಿಕ್ಕಿರುವುದಕ್ಕೆ ಅವರ ಸಹೋದ್ಯೋಗಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಯೂ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಶಿವಮೊಗ್ಗದಲ್ಲಿಯೇ ವಿದ್ಯಾಭ್ಯಾಸ ಮಾಡಿರುವ ಮಹಿಳಾ ಅಧಿಕಾರಿಯೊಬ್ಬರು ಐಎಎಸ್ಗೆ ಬಡ್ತಿ ಹೊಂದಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ.

