![Banglur Crime](https://tungataranga.com/wp-content/uploads/2021/06/Crime.jpg)
ಸಾಗರ : ಆನಂದಪುರದ ತ್ಯಾಗರ್ತಿಯ ಚಿಕ್ಕ ಬಿಲಗುಂಜಿ ಗ್ರಾಮದ ಪ್ರಜ್ವಲ್(20) ಎಂಬಾತ ಬೈಕ್ ಅಪಘಾತದಲ್ಲಿ ಮೃತ ಪಟ್ಟ ಘಟನೆ ನಡೆದಿದೆ.
![](https://tungataranga.com/wp-content/uploads/2025/02/IMG-20250206-WA00161-1-1024x521.jpg)
ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ ಪ್ರಜ್ವಲ್ ರವರ ಮನೆಗೆ ಬಂದಿದ್ದ ಸಂಬಂಧಿಕರನ್ನು ರಾತ್ರಿ ಊರಿಗೆ ಬಿಟ್ಟು ಬರುವ ಸಂದರ್ಭದಲ್ಲಿ ಕಾಸ್ಪಾಡಿ ಬಳಿ ಬೈಕ್ ಅಪಘಾತಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ.
![](https://tungataranga.com/wp-content/uploads/2023/04/Screenshot_2023_0226_070755-1.jpg)
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ.
ಪ್ರಕರಣ ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.