![pranavananda swamiji-](https://tungataranga.com/wp-content/uploads/2025/02/pranavananda-swamiji-.jpg)
ಶಿವಮೊಗ್ಗ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಜನಾರ್ಧನ್ ಅವರು ಕರ್ತವ್ಯ ನಿರತರಾಗಿದ್ದಾಗ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವುದನ್ನು ಈಡಿಗ ಬಿಲ್ಲವ ನಾಮದಾರಿ ಸಮಾಜ ಸಂಪೂರ್ಣವಾಗಿ ಖಂಡಿಸುತ್ತದೆ ಎಂದು ಕಲಬುರಗಿಯ ಈಡಿಗ ಮಠದ ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳದರು.
ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿ, ಹಿಂದುಳಿದ ವರ್ಗದ ಮಹಿಳಾ ಅಧಿಕಾರಿಗೆ ನಮ್ಮ ಸಮಾಜ ನೈತಿಕ ಸ್ಥೈರ್ಯ ತುಂಬಬೇಕಾಗಿದೆ. ಅವರ ಮನೆಗೆ ತೆರಳಿ ಒಂದು ಗಂಟೆ ಕಾಲ ಮಾತನಾಡಿ ಧೈರ್ಯ ತುಂಬಿದ್ದೇವೆ. ಹಿಂದುಳಿದ ವರ್ಗದ ಪರವಾಗಿದ್ದೇವೆ ಎನ್ನುವ ಕಾಂಗ್ರೆಸ್ ಸರ್ಕಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಪಮಾನ ಆದಾಗ ಆರೋಪಿಗಳನ್ನು ಬಂಧಿಸಲು ತೋರಿಸಿದಿ ಆಸಕ್ತಿಯುನ್ನು ಏಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದರು.
![](http://tungataranga.com/wp-content/uploads/2023/04/Screenshot_2023_0226_070755-1.jpg)
ದೂರಿನಲ್ಲೂ ಕೂಡ ಎಂಎಲ್ಎ ಮಗನ ಹೆಸರಿಲ್ಲ. ಇನ್ನೂ ಅವನನ್ನು ಬಂಧಿಸಿಲ್ಲ. ಮಹಿಳಾ ಅಧಿಕಾರಿಗಳಿಗೆ ಈ ಸರ್ಕಾರದಲ್ಲಿ ರಕ್ಷಣೆ ಇಲ್ಲ. ಅವರು ಭಯಭೀತರಾಗಿದ್ದಾರೆ. ಕೂಡಲೆ ಅವಾಚ್ಯ ನಿಂದನೆ ಮಾಡಿದ ಶಾಸಕರ ಮಗನನ್ನು ಬಂಧಿಸಬೇಕು. ಶಾಸಕರು ತಮ್ಮ ಸ್ಥಾನಗಳಿಗೆ ರಾಜಿನಾಮೆ ಕೊಡಬೇಕು ಎಂದು ಆಗ್ರಹಿಸಿದರು.
![](http://tungataranga.com/wp-content/uploads/2025/02/IMG_20250125_140612-1.jpg)
ಭದ್ರಾವತಿ ಭಾರತದ ಒಂದು ಭಾಗವಾಗಿದೆ. ಅದು ಕೂಡ ಸಂವಿಧಾನಕ್ಕೆ ಒಳಪಟ್ಟಿದೆ. ಆದರೂ ಕೂಡ ಮಹಿಳೆಯರಿಗೆ ನಿಂದನೆ ಮಾಡಿದ ವ್ಯಕ್ತಿಯ ಬಂಧನವಾಗಿಲ್ಲ. ಪೊಲೀಸರು ಸೊಮೊಟೋ ಕೇಸ್ ದಾಖಲಿಸಿ ಬಂಧಿಸಬೇಕಾಗಿತ್ತು. ಈಡಿಗ ಸಮಾಜ ಸ್ವಾಭಿಮಾನಿ ಸಮಾಜವಾಗಿದೆ. ಹಿಂದಿನ ಸರ್ಕಾರ ನಿಗಮ ಘೋಷಣೆ ಮಾಡಿದ್ದರೂ ಈಡಿಗ ನಿಗಮಕ್ಕೆ ಈ ಸರ್ಕಾರ ಒಂದು ರೂ. ಕೂಡ ನೀಡಿಲ್ಲ. ಈಡಿಗ ಅಧಿಕಾರಿಗಳನ್ನು ದಮನಿಸುವ ಕೆಲಸ ಈ ಸರ್ಕಾರ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಆ ಮಹಿಳಾ ಅಧಿಕಾರಿಗೆ ಬೆದರಿಕೆ ಅಥವಾ ಕಿರಿ ಕಿರಿ ಸರ್ಕಾರ ಅಥವಾ ಹಿರಿಯ ಅಧಿಕಾರಿಗಳು ಮಾಡಿದ್ದಲ್ಲಿ ಈಡಿಗ ಸಮಾಜ ಸುಮ್ಮನಿರುವುದಿಲ್ಲ. ತಕ್ಕ ಪಾಠ ಕಲಿಸುತ್ತೇವೆ ಎಂದರು.
ಶಾಸಕರ ಮಗನನ್ನು ಕೂಡಲೇ ಬಂಧಿಸಿದ್ದರೆ ಭದ್ರಾವತಿ ಚಲೋ ಅಭಿಯಾನ ಹಮ್ಮಿಕೊಳ್ಳುತ್ತೇವೆ. ಈಡಿಗ ಸಮಾಜ ಅಧಿಕಾರಿಗೆ ನೈತಿಕ ಬೆಂಬಲ ಕೊಡುತ್ತದೆ ಎಂದರು.
![](http://tungataranga.com/wp-content/uploads/2025/02/Screenshot_2025_0125_190116-429x1024.jpg)
ಗ್ಯಾರಂಟಿಗಳಿಗಿಂತ ನಮ್ಮ ಸಮಾಜದ ಹೆಣ್ಣು ಮಕ್ಕಳ ಸ್ವಾಭಿಮಾನ ದೊಡ್ಡದು. ಸರ್ಕಾರದ ವಿಳಂಬ ನೀತಿ ಒಂದೇ ಕಡೆ ಹೋಗುತ್ತಿದೆ. ಆರೋಪಿತನ ತಪ್ಪಿಲ್ಲದಿದ್ದರೆ ಧ್ವನಿ ಮುದ್ರಿತ ಸ್ಯಾಂಪಲ್ ಅನ್ನು ಎಫ್ಎಸ್ಎಲ್ ಗೆ ಕಳಿಸಿ ತನಿಖೆ ಮಾಡಲಿ. ಕೂಡಲೇ ಸಿಎಂ, ಡಿಸಿಎಂ ಮತ್ತು ಸೋನಿಯಾ ಗಾಂಧಿ ಅವರು ಈ ಬಗ್ಗೆ ಗಮನಹರಿಸಬೇಕು. ಇಲ್ಲವಾದರೆ ಈಡಿಗ ಸಮಾಜದ ಮತಗಳು ಬೇಡವೆಂದು ಘೋಷಿಸಲಿ ಎಂದರು.
ರಾಜ್ಯದಲ್ಲಿ ಕೇವಲ ಎರಡು ಮುಂದುವರೆದ ವರ್ಗದ ಜನರಿಗೆ ಮಾತ್ರ ನ್ಯಾಯ ಸಿಗುತ್ತಿದೆ. ಹಿಂದುಳಿದ ವರ್ಗದವರಿಗೆ ಅನ್ಯಾಯವಾಗುತ್ತಿದೆ. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ತಕ್ಕ ಶಾಸ್ತಿ ಅನುಭವಿಸುತ್ತದೆ ಎಂದರು.
ಬಳಿಕ ಅವರು ಜಿಲ್ಲಾ ರಕ್ಷಣಾಧಿಕಾರಿಗಳಿಗೂ ಮನವಿ ನೀಡಿ ತಪ್ಪಿತಸ್ಥ ಪ್ರಮುಖ ಆರೋಪಿ ಮೇಲೆ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ವೆಂಕಟೇಶಮೂರ್ತಿ, ಪುಷ್ಪಲತಾ ಮೂರ್ತಿ, ಗೀತಾಂಜಲಿ ದತ್ತಾತ್ರೇಯ, ಪ್ರೀತಾ ಪೂಜಾರಿ, ಮಂಜುನಾಥ್, ಯೋಗೇಂದ್ರ, ಲಲಿತಾ ಹೊನ್ನಪ್ಪ, ಮಂಜುಳಾ ರಾಘವ, ವಾಸಪ್ಪ ಮಾಸ್ತಿಕಟ್ಟೆ, ಸಚಿನ್ ನಾಯಕ್, ದೇವರಾಜ್ ನಾಯಕ್, ಪ್ರಶಾಂತ್ ನಾಯಕ್, ಮತ್ತಿತರರು ಇದ್ದರು.