
ಕ್ರೀಡಾಪಟುಗಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಅನೇಕ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ. ಇದರಂತೆ ಶಿವಮೊಗ್ಗ ಜಿಲ್ಲೆಯ ಥ್ರೋಬಾಲ್ ಸಂಸ್ಥೆ,ಇವರ ಆಶ್ರಯದಲ್ಲಿ ಮಾಜಿ ಮುಖ್ಯ ಮಂತ್ರಿಗಳಾದ ಮಾನ್ಯ, ಶ್ರೀಯುತ ಬಿ.ಎಸ್. ಯಡಿಯೂರಪ್ಪ ಅವರ 81 ನೆ ಹುಟ್ಟು ಹಬ್ಬದ ಪ್ರಯುಕ್ತ, ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿಯನ್ನು ಮಹಿಳೆಯರು ಮತ್ತು ಪುರುಷರಿಗಾಗಿ “ಬಿ.ಎಸ್.ವೈ ಕಪ್ ಥ್ರೋಬಾಲ್ “ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮಹಿಳೆಯರು ಮತ್ತು ಪುರುಷರ 15 ತಂಡಗಳು ಭಾಗವಹಿಸಿ, ಅದ್ಭುತ ಆಟದ ಪ್ರದರ್ಶನ ನೀಡಲಿವೆ. ವಿಜೇತ ತಂಡಗಳಿಗೆ ಆಕರ್ಷಕ ಬಹುಮಾನ ಮತ್ತು ಟ್ರೋಫಿ ಹಾಗೂ ಪಾರಿತೋಷಕಗಳನ್ನು ನೀಡಲಾಗುವುದು.
“ನಗದು ಬಹುಮಾನ “

ಮಹಿಳೆಯರ ವಿಭಾಗ :-
ಪ್ರಥಮ ಸ್ಥಾನ –6000 ರೂ, ದ್ವಿತೀಯ ಸ್ಥಾನ–4,000 ರೂ, ತೃತೀಯ ಸ್ಥಾನ — 3,000 ರೂ, ಚತುರ್ಥ ಸ್ಥಾನ — 2,000 ರೂ ನಗದು ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.
“ಪುರುಷರ ವಿಭಾಗ :- ಪ್ರಥಮ ಸ್ಥಾನ – 6,000 ರೂ, ದ್ವಿತೀಯ ಸ್ಥಾನ-4,000 ರೂ, ತೃತೀಯ ಸ್ಥಾನ – 3,000 ರೂ, ಚತುರ್ಥ ಸ್ಥಾನ – 2,000 ರೂ ನಗದು ಬಹುಮಾನ ನೀಡಿ ಗೌರವಿಸಲಾಗುವುದು.

ಪಂದ್ಯಾವಳಿಯು ದಿನಾಂಕ 27 -2- 2025 ರಂದು ಒಂದು ದಿನ ಹಗಲು ಹಾಗೂ ಹೊನಲು ಬೆಳಕಿನ 2 ಥ್ರೋಬಾಲ್ ಅಂಕಣದ ವ್ಯವಸ್ಥೆಯನ್ನು ಮಾಡಲಾಗಿದ್ದು,ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಾವಳಿಯು ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದ್ದು ಜಿಲ್ಲೆಯ 20 ವರ್ಷ ಮೇಲ್ಪಟ್ಟ ಕ್ರೀಡಾ ಪಟುಗಳನ್ನೊಳಗೊಂಡ ತಂಡಗಳು ಜಿಲ್ಲೆಯ ಪುರುಷ ಹಾಗೂ ಮಹಿಳಾ ತಂಡಗಳು ಭಾಗವಹಿಸಬಹುದಾಗಿದೆ.
ಆಟಗಾರ ಅನುಕೂಲಕ್ಕಾಗಿ ಉತ್ತಮ ಅಂಕಣಗಳನ್ನು ಸಿದ್ಧಪಡಿಸಲಾಗಿದೆ . ರಾಜ್ಯ ಮಟ್ಟದ ನುರಿತ ಥ್ರೋಬಾಲ್ ತೀರ್ಪುಗಾರರು ಆಗಮಿಸಲಿದ್ದಾರೆ. ಜಿಲ್ಲೆಯ ವಿವಿಧ ತಾಲೂಕುಗಳಿಂದ ಬರುವ ಎಲ್ಲಾ ಕ್ರೀಡಾಪಟುಗಳಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.
ಪತ್ರಿಕಾ ಗೋಷ್ಠಿಯಲ್ಲಿ
ಯಡಿಯೂರಪ್ಪ ಅಭಿಮಾನಿಬಳಗದ ಸಂಚಾಲಕರಾದ ಸಂತೋಷ್ ಬಳ್ಳೇಕೆರೆ,ರಾಜೇಶ್ ಕಾಮತ್,ದಿನಕರ್ ಶೆಟ್ಟಿ ರಾ ಹ ತಿಮ್ಮೆನಳ್ಳಿ ಅಧ್ಯಕ್ಷರು, ಕೆ. ಜಿ.ಮಠಪತಿ ಕಾರ್ಯದರ್ಶಿ,
ರಘು ಎಲ್. ಎಸ್.ಉಪಾಧ್ಯಕ್ಷರು,
ಲೋಕೇಶ್ ಪಿ.,
ರಾಜೇಶ್ವರಿ, ಸವಿತಾ,ವಿನಯ್ ಚೌವಡಕಿ, ಹನುಮಂತಪ್ಪ
ಇನ್ನೂ ಮುಂತಾದವರು ಉಪಸ್ಥಿತರಿದ್ದರು.,
ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ 27.02.2024 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಮಟ್ಟದ ಪುರುಷ ಮತ್ತು ಮಹಿಳೆಯರ ಥ್ರೋ ಬಾಲ್ ಪಂದ್ಯಾವಳಿಯ ಉದ್ಘಾಟನೆಯನ್ನು ಮಾಜಿ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ರವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಸಂಸದರಾದ ಸನ್ಮಾನ್ಯ ಶ್ರೀ ಬಿ.ವೈ.ರಾಘವೇಂದ್ರ ರವರು ಘನ ಉಪಸ್ಥಿತಿತರಿರುವರು. ಸಮಾರಂಭದ ಅಧ್ಯಕ್ಷತೆಯನ್ನು ವಿಧಾನಪರಿಷತ್ತಿನ ಸದಸ್ಯರಾದ ಶ್ರೀ ಡಿ.ಎಸ್. ಅರುಣ್ ರವರು ವಯಿಸಲಿದ್ದು, ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಶಾಸಕರು ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ರವರು, ಶಿವಮೊಗ್ಗ ಕ್ಷೇತ್ರದ ಶಾಸಕರಾದ ಚನ್ನಬಸಪ್ಪ (ಚೆನ್ನಿ ), ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್. ರುದ್ರೇಗೌಡರು, ವಿಧಾನ ಪರಿಷತ್ ಸದಸ್ಯರಾದ ಡಾ|| ಧನಂಜಯ ಸರ್ಜಿ ,ಬಿಜೆಪಿ ಮುಖಂಡರಾದ ಸಂತೋಷ್ ಬಳ್ಳೆಕೆರೆ, ರಾಜ್ಯ ವಾಲಿಬಾಲ್ ಸಂಸ್ಥೆಯ ಖಜಾಂಚಿ ಕೆ. ಎಸ್. ಶಶಿ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಪ್ರಕಾಶ್ ಎಂ. ಇನ್ನೂ ಮುಂತಾದವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಅಂದು ಸಂಜೆ :6: 30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ಹೊನಲು ಬೆಳಕಿನಲ್ಲಿ ಮಹಿಳೆಯರ ಮತ್ತು ಪುರುಷರ ಅಂತಿಮ ಹಂತದ ಫೈನಲ್ ಪಂದ್ಯ ನಡೆಯಲಿವೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ಅಧ್ಯಕ್ಷತೆ ವಹಿಸುವರು. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶ್ರೀ ಎಸ್. ಎಸ್. ಜ್ಯೋತಿ ಪ್ರಕಾಶ್ ರವರು ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ. ಎಸ್. ಷಡಾಕ್ಷರಿ,ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀ ಮಾಲತೇಶ್ ಸಿ. ಎಚ್., ಜಂಗಲ್ ರೆಸಾರ್ಟ್ ಮಾಜಿ ನಿರ್ದೇಶಕರಾದ ರಾಜೇಶ್ ಕಾಮತ್, ಸಿಮ್ಸ್ ಮೆಡಿಕಲ್ ಕಾಲೇಜಿನ ಮಾಜಿ ನಿರ್ದೇಶಕರಾದ ದಿವಾಕರ್ ಶೆಟ್ಟಿ, ನೆಹರು ಕ್ರೀಡಾಂಗಣದ ಸಹಾಯಕ ನಿರ್ದೇಶಕರಾದ ರೇಖ್ಯಾನಾಯ್ಕ, ದೈಹಿಕ ಶಿಕ್ಷಣ ಅಧಿಕಾರಿಗಳಾದ ಬಿ.ಎಚ್.ನಿರಂಜನ್ ಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ,ರಾ. ಹ. ತಿಮ್ಮೇನಹಳ್ಳಿ, ಥ್ರೋ ಬಾಲ್ ಸಂಸ್ಥೆಯ ಕಾರ್ಯದರ್ಶಿ, ಕೆ.ಜಿ. ಮಠಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತ ತಂಡಳಿಗೆ ಬಹುಮಾನ ವಿತರಿಸಲಿದ್ದಾರೆ.
ನಿಬಂಧನೆಗಳು —1) ತಂಡಗಳು ಕಡ್ಡಾಯವಾಗಿ ಕ್ರೀಡಾ ಸಮವಸ್ತ್ರ ಧರಿಸಿ ಈ ಪಂದ್ಯಾವಳಿಯಲ್ಲಿ ಭಾಗವಹಿಸಬೇಕು.
2) ವಯೋಮಿತಿ 18 ವರ್ಷ ಮೇಲ್ಪಟ್ಟ
ಪುರುಷ ಮತ್ತು ಮಹಿಳಾ ತಂಡಗಳು ಭಾಗವಹಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲಾ ಥ್ರೋಬಾಲ್ ಸಂಸ್ಥೆಯ ಕಾರ್ಯದರ್ಶಿ ಕೆ.ಜಿ.ಮಠಪತಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ, 9945474104, 9880839575, 9972572118 ಸಂಪರ್ಕಿಸಿ.