
ಶಿವಮೊಗ್ಗ ಮಾರ್ಚ್ 07: 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಮಾ.09 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್ಗಳನ್ನು ತರೆಯಲಾಗಿದೆ.

ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ದುರ್ಗಿಗುಡಿ ಸರ್ಕಾರಿ ಶಾಲೆಯ ಹತ್ತಿರ, ವಿನೋಬನಗರ ಕಲ್ಲಹಳ್ಳಿ ಅಭಿಷ್ಟವರ ಗಣಪತಿ ದೇವಸ್ಥಾನದ ಹತ್ತಿರ, ಹೆಚ್. ಸಿದ್ದಯ್ಯ ರಸ್ತೆ ಗಾಯತ್ರಿ ವಿದ್ಯಾಲಯನದ ಹತ್ತಿರ, ಸವಳಂಗ ರಸ್ತೆ, ಎಲ್.ಬಿ.ಎಸ್.ನಗರ ಬ್ಯಾಂಕ್ ಆಫ್ ಬರೋಡ ಹತ್ತಿರ ಹಾಗೂ ಅಶೋಕನಗರ ನಂದಿನಿ ಡೈರಿ ಹತ್ತಿರ ವಿಶೇಷ ವಸೂಲಾತಿ

ಕೌಂಟರ್ ತೆರೆದಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.