ಶಿವಮೊಗ್ಗ: ಎರಡು ಪ್ರತ್ಯೇಕ ರಸ್ತೆ ಅಪಘಾತ ಸಂಭವಿಸಿದ್ದು ಓರ್ವ ಮೃತಪಟ್ಟಿದ್ದು ಇನ್ನೊಬ್ಬ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಮರಕ್ಕೆ ಬೈಕ್ವೊಂದು ಡಿಕ್ಕಿ ಹೆಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ರಾಜು (೨೭) ಎಂದು ಗುರುತಿಸಲಾಗಿದೆ.


ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್ ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ.

ಸಿದ್ದರಹಳ್ಳಿಯ ರಾಜು ಕೂಲಿ ಕೆಲಸ ಮಾಡಿಕೊಂಡಿದ್ದು ೬ ತಿಂಗಳ ಹಿಂದೆ ಮದುವೆಯಾಗಿದ್ದ. ನಿನ್ನೆ ರಾತ್ರಿ ವಾಜಪೇಯಿ ಲೇಔಟ್ನಲ್ಲಿ ಬೈಕ್ ಸಮೇತ ಬಿದ್ದಿದ್ದಾನೆ.

ಮೃತ ರಾಜುವಿನ ಕಣ್ಣು ಗುಡ್ಡೆಗಳು ಹೊರಗೆ ಬಿದ್ದಿದೆ. ಅಪಘಾತ ಸಂಭವಿಸಿದ್ದರೆ ಕಣ್ಣು ಗುಡ್ಡೆಗಳು ಹೊರಗೆ ಯಾಕೆ ಬರುತ್ತವೆ ಎಂದು ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ಮೊಬೈಲ್ ಹೊರಗೆ ಕಟ್ಟೆ ಮೇಲೆ ಕಾಣಿಸಿಕೊಂಡಿದೆ. ಇದೆಲ್ಲಾ ಅನುಮಾನಕ್ಕೆ ಕಾರಣವಾಗಿದ್ದು, ಅಪಘಾತದ ಹೆಸರಿನಲ್ಲಿ ಇದೊಂದು ಕೊಲೆ ಎಂದು ಆತನ ಕುಟುಂಬ ಅನುಮಾನ ವ್ಯಕ್ತಪಡಿಸಿದೆ.

ಪತಿ ಮೃತನಾದರೂ ಪತ್ನಿ ಮೃತನನ್ನು ನೋಡಲು ಬಂದಿಲ್ಲದಿರುವುದು ಹಲವು ಅನುಮಾಕ್ಕೆ ಕಾರಣ ಎಂದು ಕುಟುಂಬ ಆರೊಪಿಸಿದೆ

.
ಮತ್ತೊಂದು ಪ್ರಕರಣದಲ್ಲಿ ಸುರೇಶ್ ಎಂಬ ೪೦ ವ?ದ ಯುವಕ ಪುರಲೆಯ ಸುಬ್ಬಯ್ಯ ಮೆಡಿಕಲ್ ಆಸ್ಪತ್ರೆಯ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರಾಗಿದ್ದಾರೆ.