
ಶಿವಮೊಗ್ಗ: 2014ರಲ್ಲಿ ನಡೆದ ಡಿಸಿಸಿ ಬ್ಯಾಂಕ್ನಲ್ಲಿ ನಡೆದ ನಕಲಿ ಬಂಗಾರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ( ಇ.ಡಿ. ) ಅಧಿಕಾರಿಗಳು ಮಂಗಳವಾರ ಶಿವಮೊಗ್ಗ ಮತ್ತು ಭದ್ರಾವತಿಯ 8ಕಡೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದರು.

ಅಂದು ಹಗರಣದ ಕೇಂದ್ರ ಬಿಂದು ಹಾಗೂ ಗಾಂಧಿಬಜಾರ್ ಡಿಸಿಸಿ ಬ್ಯಾಂಕ್ ಶಾಖಾ ಮ್ಯಾನೇಜರ್ ಆಗಿದ್ದ ಶೋಭಾ ಅವರ ನಿವಾಸ,

ಚಾಲಕರಾಗಿದ್ದ ಕಾಮಾಕ್ಷಿ ಬೀದಿಯ ಶಿವಕುಮಾರ್ ಮನೆ, ಭದ್ರಾವತಿ ಜೆಡಿಕಟ್ಟೆಯಲ್ಲಿರುವ ಡಿಸಿಸಿ ಬ್ಯಾಂಕ್ ಸಿಬ್ಬಂದಿ, ಮಾಡ್ರನ್ ಚಲನಚಿತ್ರ ಮಂದಿರ ಬಳಿಯಿರುವ ಡಿಸಿಸಿ ಬ್ಯಾಂಕ್ ಶಾಖೆ ಸೇರಿದಂತೆ 8 ಕಡೆ ದಾಳಿ ನಡೆದಿದೆ.

ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯ ಮ್ಯಾನೇಜರ್ ಆಗಿದ್ದ ನಾಗಭೂಷಣ, ಗೋಪಾಲ ಗೌಡ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಶೋಭಾ ಅವರ ಮನೆಯ ಮೇಲೆ ಬೆಂಗಳೂರಿನಿಂದ ಇಡಿ ಕಚೇರಿಯ ತಂಡದಿಂದ ದಾಳಿ ನಡೆದಿದೆ.

ಡಿಸಿಸಿ ಹಗರಣಕ್ಕೆ ಸಂಬಂಧಿಸಿದಂತೆ ದಾಳಿ- ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಪ್ರತ್ಯೇಕ ವಾಹನಗಳಲ್ಲಿ ಆಗಮಿಸಿರುವ 96 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಹೆಚ್ಚಿನ ಮಾಹಿತಿ ದೊರಕಬೇಕಿದೆ.