2024- 2025 ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ತೇಜಸ್ ಧನೀಗೌಡ ಶ್ರೀಅದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದು, 600 ಕ್ಕೆ 587 ಅಂಕ ಗಳಿಸುವ ಮೂಲಕ ಶೇ 97.83 ಫಲಿತಾಂಶ ದೊಂದಿಗೆ ಅತ್ಯುತ ಶ್ರೇಣಿಯಲ್ಲಿ

ಪಾಸಾಗಿದ್ದು, ಈ ವಿದ್ಯಾರ್ಥಿಯು ರಾಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರದಲ್ಲಿ ಶೇ. 100 ಫಲಿತಾಂಶ ಪಡೆದಿರುವುದು ಹಿರಿಮೆಯ ಸಂಗತಿ.

ಈ ಪ್ರತಿಭಾನ್ವಿತ ವಿದ್ಯಾರ್ಥಿ ನಗರದ ಸಂಧ್ಯಾ ನಾಗರಾಜ್ ಪುತ್ರರಾಗಿರುತ್ತಾನೆ.

ವಿದ್ಯಾರ್ಥಿಗಳ ಸಾಧನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಗುರುರಾಜ್ ಎಸ್. ವಿ., ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.