ಶಿವಮೊಗ್ಗ, ಮೇ 02: ರುದ್ರಪ್ಪ ತವನಪ್ಪ ಜೈನರ್ ಎಂಬುವವರು ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿರುವ ನ್ಯಾಷನಲ್ ಇನ್ಶೂರೆನ್ಸ್ ಕಂಪೆನಿ ಲಿ., ವಿರುದ್ದ ವಿಮಾ ಸೌಲಭ್ಯ ನೀಡುವಲ್ಲಿನ ಸೇವಾ ನ್ಯೂನತೆ ಕುರಿತು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವಿಮಾ ಕಂಪೆನಿಯು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ.

ದೂರುದಾರ ರುದ್ರಪ್ಪರವರು ತಮ್ಮ ಟಾಟಾ ಎಲ್ಪಿಟಿ ಲಾರಿಯನ್ನು ಖರೀದಿಸಿದಾಗ ನ್ಯಾಷನಲ್ ಇನ್ಷೂರನ್ಸ್ ಕಂಪನಿಯವರಿAದ ಐಡಿವಿ ಮೊತ್ತ ರೂ 23,36,519/- ಗಳಿಗೆ ವಿಮೆಯನ್ನು ಮಾಡಿಸಿದ್ದು, ಲಾರಿಯುವ 2023ರ ಡಿಸೆಂಬರ್ನಲ್ಲಿ ನಿಲ್ಲಿಸಿದ್ದ ಜಾಗದಲ್ಲಿ ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಇಂಜಿನ್ ಸುಟ್ಟುಹೋಗಿರುತ್ತದೆ. ಈ ಕುರಿತು ಪೊಲೀಸ್ ಹಾಗೂ ಆರ್.ಟಿ.ಓ.ರವರಿಗೆ ದೂರು ನೀಡಿ, ಅವರಿಂದ ಪರೀಶಿಲನೆ ಮಾಡಿಸಿದಾಗ

ಆರ್.ಟಿ.ಓರವರು ಲಾರಿಗೆ 1.25 ಲಕ್ಷ ನಷ್ಟವಾಗಿರುವುದಾಗಿ ವರದಿ ನೀಡಿರುತ್ತಾರೆ. ಈ ವರದಿಯ ಪ್ರಕಾರ ಎದುರುದಾರರಿಗೆ ವಿಮೆ ಪಾವತಿಸಲು ಕೋರಿರುತ್ತಾರೆ. ಆದರೆ ಎದುರುದಾರ ಇನ್ಷೂರನ್ಸ್ ಕಂಪನಿಯು ವಾಹನ ಚಾಲಕರಿಗೆ ಲಾರಿಯನ್ನು ವಹಿಸಿರುವುದು ಪಾಲಿಸಿಯ ಷರತ್ತು ಮತ್ತು ನಿಬಂಧನೆಗಳಿಗೆ ವಿರುದ್ಧವಾಗಿದೆ ಹಾಗೂ ಇದರ ಸಂಬAಧ ಸರಿಯಾದ ದಾಖಲೆ ಮಾಡಿಸಿರುವುದಿಲ್ಲ ಎಂಬ ಕಾರಣ ನೀಡಿ ವಿಮಾ ಹಣವನ್ನು ನೀಡಲು ನಿರಾಕರಿಸಿರುತ್ತಾರೆ ಎಂದು ದೂರು ಸಲ್ಲಿರುತ್ತಾರೆ.

ಆಯೋಗವು ನೀಡಿದ ನೋಟಿಸ್ಗೆ ಎದುರುದಾರರು ವಕೀಲರ ಮೂಲಕ ಹಾಜರಾಗಿ ತಕರಾರು ಸಲ್ಲಿಸಿರುತ್ತಾರೆ.
ದೂರುದಾರರು ಮತ್ತು ಎದುರುದಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ ಮತ್ತು ಉಭಯ ಪಕ್ಷಗಾರರ ವಕೀಲರ ವಾದವನ್ನು ಆಲಿಸಿ, ಎದುರುದಾರರು ಸೇವಾ ನ್ಯೂನತೆ ಎಸಗಿರುವುದಾಗಿ ಪರಿಗಣಿಸಿ ದೂರುದಾರರು ಸಲ್ಲಿಸಿರುವ ದೂರನ್ನು ಭಾಗಶಃ

ಪುರಸ್ಕರಿಸಿ, ವಾಹನದ ಐ.ಡಿ.ವಿ. ಮೊತ್ತ ರೂ.23,36,519 ಗಳನ್ನು ದಿ:15/07/2024ರಿಂದ ಅನ್ವಯವಾಗುವಂತೆ ಶೇ.9 ರಂತೆ ಬಡ್ಡಿ ಸಹಿತ ಪೂರ ಹಣ ನೀಡುವವರೆಗೂ ಮತ್ತು ಫರ್ಯಾದುದಾರರು ಈ ಸುಟ್ಟ ವಾಹನವನ್ನು ಎದುರುದಾರರಿಗೆ ಹಿಂದಿರುಗಿಸಬೇಕೆAದು ನಿರ್ದೇಶಿಸಿ,

ಆದೇಶವನ್ನು 45 ದಿನಗಳೊಳಗೆ ಪಾಲಿಸಲು, ತಪ್ಪಿದಲ್ಲಿ ವಿಮಾ ಮೊತ್ತಕ್ಕೆ ಶೇ.12 ರಂತೆ ಬಡ್ಡಿ ಸಹಿತ ಪಾವತಿಸಲು ಹಾಗೂ ರೂ.50,000 ಗಳನ್ನು ಮಾನಸಿಕ ಹಿಂಸೆಗಾಗಿ ಮತ್ತು ರೂ.10,000 ಗಳನ್ನು ವ್ಯಾಜ್ಯದ ಖರ್ಚಾಗಿ ನೀಡಬೇಕೆಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಏ. 23 ರಂದು ಆದೇಶಿಸಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟಾçರ್ ತಿಳಿಸಿದ್ದಾರೆ.