ಎಲ್ಲಾ ದಾನಗಳಿಗಿಂತ ರಕ್ತದಾನ ತುಂಬಾ ಶ್ರೇಷ್ಠವಾದ ದಾನ ದಾನದಿಂದ ಸದಾ ಲವಲವಿಕೆಯಿಂದ ಇರುವುದರ ಜೊತೆಗೆ ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಎಸ್ ಪಿ ದಿನೇಶ್ ಅವರು ಅಭಿಮತ ವ್ಯಕ್ತಪಡಿಸಿದರು ಅವರು ಇಂದು ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ವತಿಯಿಂದ ಶೋಭಾ ಕಡಿದಾಳ ಸಭಾಂಗಣದಲ್ಲಿ ಆಯೋಜಿಸಲಾಗ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಹಾಗೂ ಬೃಹ ರಕ್ತದಾನ ಶಿಬಿರ ಹಾಗೂ ರಕ್ತದಾನದ ಬಗ್ಗೆ ಜಾಗೃತಿ

ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು . ಇಂದು ರಕ್ತದ ಕೊರತೆ ಸಾಕಷ್ಟು ಇದೆ ಸಕಾಲದಲ್ಲಿ ರಕ್ತ ಸಿಗದೇ ಸಾಕಷ್ಟು ಜನ ಪ್ರಾಣವನ್ನು ಬಿಡುತ್ತಿದ್ದಾರೆ ಈ ನಿಟ್ಟಿನಲ್ಲಿ ಯುವಕರು ಯುವತಿಯರು ರಕ್ತದಾನ ಮಾಡಿ ಸದೃಢವಾದ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ನುಡಿದರು ಮೂಢನಂಬಿಕೆಯಿಂದ ಹೊರ ಬಂದು ರಕ್ತದಾನ ಮಾಡಿ ಇನ್ನೊಬ್ಬರ ಪ್ರಾಣ ಉಳಿಸುವ ಪುಣ್ಯದ ಕೆಲಸದಲ್ಲಿ ನಾವು

ನೀವೆಲ್ಲರೂ ಪಾಲ್ಗೊಳ್ಳೋಣ ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠದಾನ ಎಂದು ನುಡಿದರು ಇದೇ ಸಂದರ್ಭದಲ್ಲಿ ಶಿಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯ್ ಕುಮಾರ್ ಅವರು ಮಾತನಾಡುತ್ತ ನಿಜವಾದ ಮನಕುಲದ ಸೇವೆಯನ್ನು ಇಂದು ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಸಂಸ್ಥೆ ಮಾಡುತ್ತ ಇದೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರಾದ ಸುದರ್ಶನ್ ತಾಯಿ ಮನೆ ಅವರು ವಹಿಸಿ ಮಾತನಾಡುತ್ತಾ ಇಂದು ರಕ್ತದಾನ ದಾನಗಳಲ್ಲಿ ಅತ್ಯಂತ ಶ್ರೇಷ್ಠವಾದ ದಾನ ನಮ್ಮ ದೇಹದಲ್ಲಿ ರಕ್ತದಾನ ಮಾಡುವ ಶಕ್ತಿ ಇದ್ದಾಗಲೇ ರಕ್ತದಾನ ಮಾಡಬೇಕು ನಾವು ಕೊಡುವ ಒಂದು ಯೂನಿಟ್ ರಕ್ತದಿಂದ ಇಂದು ನಾಲ್ಕು ಜನರ

ಪ್ರಾಣವನ್ನ ಉಳಿಸಬಹುದಾಗಿದೆ ಇಂದಿನ ಪರಿಸ್ಥಿತಿಯಲ್ಲಿ ರಸ್ತೆ ಅಪಘಾತಗಳು ಆದಾಗ ಮತ್ತು ಹೆರಿಗೆ ಸಂದರ್ಭದಲ್ಲಿ ಮಾತೃ ಮರಣ ತಡೆಯಲು ರಕ್ತದ ಅವಶ್ಯಕತೆ ಇರುತ್ತೆ ಇದಕ್ಕೆ ನಾವು ರಕ್ತದಾನ ಮಾಡಬೇಕು ರಕ್ತ ಅಮೂಲ್ಯ ವಾದದ್ದು ಎಂದು ಮುಖ್ಯ ಅತಿಥಿ ಯಾಗಿ ಭಗವಾಹಿಸಿದ ರೆಡ್ಕ್ರಾ ಸ್ ನಿರ್ದೇಶಕರು ಡಾ. ರೇಷ್ಮಾ ಇವರು ಇಂತಹ ಪವಿತ್ರ ಕಾರ್ಯದಲ್ಲಿ ನಮ್ಮ ಮಕ್ಕಳು ಪಾಲ್ಗೊಳ್ಳುತ್ತಿರುವುದು ತುಂಬಾ ಹೆಮ್ಮೆಯ
ವಿಷಯವಾಗಿದೆ ಮುಂದಿನ ದಿನಗಳಲ್ಲಿ ನಮ್ಮ ಕಾಲೇಜಿನಲ್ಲಿ ಇರುವ ಎಲ್ಲಾ ವಿದ್ಯಾರ್ಥಿಗಳು ಸಹ ರಕ್ತದಾನ ಮಾಡಲು ಅವರಿಗೆ ಪ್ರೇರೇಪಿಸುತ್ತೇವೆ ಎಂದು ನುಡಿದರು ವೇದಿಕೆಯಲ್ಲಿ ರೆಡ್ ಕ್ರಾಸ್ ನಿರ್ದೇಶಕರಾದ ಡಾ. ರೇಷ್ಮಾ. ಆರ್ ಗಿರೀಶ್. ಶ್ರೀ. ಕೆ. ಸಿ ಬಸವರಾಜ, ಗೌರವ ಕಾರ್ಯದರ್ಶಿಗಳು ಡಾ. ದಿನೇಶ್ ಉಪಾಧ್ಯಕ್ಷರಾದ ಟೀ ಆರ್ ಅಶ್ವಥ್ ನಾರಾಯಣ್. ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಮಧು ರಕ್ತದಾನಿ ಧರಣೇಂದ್ರ ದಿನಕರ್. ದೈಹಿಕ ಶಿಕ್ಷಣ ನಿರ್ದೇಶಕರಾದ ಶೀಲಾ ಎನ್ ಹೆಚ್ ಉಪಸ್ಥಿತರಿದ್ದರು