ಶಿವಮೊಗ್ಗ :ಜೂ 30 :ಮಕ್ಕಳ ಕಲಿಕೆ ಮತ್ತು ಶಿಕ್ಷಣ ವ್ಯವಸ್ಥೆಯ ಕರ್ತವ್ಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಅತಿ ಮುಖ್ಯ, ಪ್ರಾತ್ಯಕ್ಷಿಕೆಯ ದೈಹಿಕ ಶ್ರಮದಿಂದ ಮಾತ್ರ ಹಾಗೂ ದೈಹಿಕ ಕಸರತ್ತುಗಳಿಂದ ಮಕ್ಕಳ ಮನೋವಿಜ್ಞಾನ ವೃದ್ಧಿಸಲು ಹೇಗೆ ಸಾಧ್ಯವೋ ಅದರಲ್ಲಿ ಸಕ್ರಿಯರಾಗುವ ದೈಹಿಕ ಶಿಕ್ಷಕರ ಪಾತ್ರ, ಶಿಕ್ಷಣ ವ್ಯವಸ್ಥೆಯಲ್ಲಿ ಅತಿ ಮುಖ್ಯ ಎಂದು ಶಿವಮೊಗ್ಗ ಕ್ಷೇತ್ರಶಿಕ್ಷಣಾಧಿಕಾರಿ ರಮೇಶ್ ತಿಳಿಸಿದರು.

ಅವರು ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ. ಹಾಗೂ ತಾಲ್ಲೂಕಿನ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಶಿವಮೊಗ್ಗ. ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ತಾಲ್ಲೂಕಿನ ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡುತ್ತಾ, ಪ್ರತಿದಿನ ಮಕ್ಕಳಿಗೆ ಕನಿಷ್ಠ 60 ನಿಮಿಷಗಳ ಕಾಲ ದೈಹಿಕ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿದಾಗ ಮಕ್ಕಳಲ್ಲಿ ಕಲಿಕೆಯ ಕಲಿಕೆಗೆ ಅಗತ್ಯವಿರುವ ಏಕಾಗ್ರತೆ ಸಾಧಿಸಿ, ಜ್ಞಾಪಕ ಶಕ್ತಿ ಬೆಳೆಯಲು ಸಹಾಯವಾಗುತ್ತದೆ ಎಂದು ಅವರು ಹೇಳಿದರು.

ಶಾಲೆಯಲ್ಲಿ ಎಲ್ಲಾ ಶಿಕ್ಷಕರು ಆಯಾ ವಿಷಯಗಳಿಗೆ ಅವುಗಳ ಬೋಧನೆಗೆ ಸಂಬಂಧ ಪಟ್ಟವರಿರುತ್ತಾರೆ. ಆದರೆ ದೈಹಿಕ ಶಿಕ್ಷಕರಿಂದ ಶಾಲೆಯಲ್ಲಿ ಶಿಸ್ತು ಮಾತ್ರವಲ್ಲ ಮಕ್ಕಳ ಅಚ್ಚುಮೆಚ್ಚಿನ ಶಿಕ್ಷಕರಾಗಿ ಗುರುತಿಸಿಕೊಳ್ಳುವ ಅವಕಾಶ ಪಡೆದಿರುತ್ತಾರೆ.ಅವರ ಕಲಿಕೆಯಿಂದ ಹಾಗೂ ಅವರ ತರಬೇತಿಯಿಂದ ಮಕ್ಕಳ ಕಲಿಕೆ ಉನ್ನತ ಮಟ್ಟಕ್ಕೆ ತಲುಪಲು ಮೆಟ್ಟಿಲಾಗುತ್ತದೆ ಎಂದು ಹೇಳಿದರು. ಮಕ್ಕಳಲ್ಲಿ ದೈಹಿಕ ಶ್ರಮದ ಜೊತೆ ಮನೋವಿಜ್ಞಾನದ ಭಾವನೆಗಳನ್ನು ವೃದ್ಧಿಸಿ ಮಾನಸಿಕವಾದ ಸ್ಥಿತಿ ಆತ್ಮಸ್ಥೈರ್ಯ,ಆತ್ಮವಿಶ್ವಾಸ ಮೂಡಿಸುವ ಜೊತೆ ಮಕ್ಕಳ ಕಲಿಕೆಗೆ ಭದ್ರಬುನಾದಿ ಹಾಕಿ ಕೊಡುವ ಏಕಾಗ್ರತೆಯನ್ನು ಇಲ್ಲಿ ಕಲಿಯಲು, ರೂಪಿಸಿಕೊಳ್ಳಲು ಸಾಧ್ಯ ಎಂದರು. ದೈಹಿಕ ಶಿಕ್ಷಕರು ಈ ಬಗ್ಗೆ ಅತ್ಯಂತ ವಿಶೇಷವಾಗಿ ಗಮನಿಸಬೇಕು ತಮ್ಮನ್ನು ಮಕ್ಕಳು ಅತ್ಯಂತ ಸೂಕ್ಷ್ಮವಾಗಿ ಗುರುತಿಸುತ್ತಾರೆ ಎಂಬುದನ್ನು ಮರೆಯದಿರಿ ತಮ್ಮ ಒಳ್ಳೆಯ ಗುಣಗಳು ಮಕ್ಕಳಿಗೆ ಮಾರ್ಗದರ್ಶಿಯಾಗಲಿ ಎಂದು ಹೇಳಿದರು.

ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಪ್ರಕಾಶ್ ಎಂ. ದೈಹಿಕ ಶಿಕ್ಷಣ ಅಧಿಕಾರಿ,ಬಿ ಎಚ್.ನಿರಂಜನ್ ಮೂರ್ತಿ. ಶಿಕ್ಷಣ ಸಂಯೋಜಕರಾದ ಮೋಹನ್, ಸಂಪನ್ಮೂಲ ವ್ಯಕ್ತಿಗಳಾದ ಕಿರಣ್ ಕುಮಾರ್,ಸಂಘದ ಅಧ್ಯಕ್ಷ ಕಾಳನಾಯ್ಕ್,, ಆನಂದ್, ಕಾರ್ಯದರ್ಶಿ ತಿಮ್ಮಪ್ಪ ಮಹೇಶ್ ಹುಲ್ಲತ್ತಿ, ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾ.ಹ.ತಿಮ್ಮನಹಳ್ಳಿ, ಇನ್ನು ಮುಂತಾದವರು ಉಪಸ್ಥಿತರಿದ್ದರು.
ಶಿವಮೊಗ್ಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಪ್ರಕಾಶ ಎಂ. ಮಾತನಾಡುತ್ತಾ ಆರೋಗ್ಯ,ಸ್ವಚ್ಛತೆ ಜೊತೆಗೆ ಶಿಸ್ತು ಹೇಳಿಕೊಡುವ ಜವಾಬ್ದಾರಿ ದೈಹಿಕ ಶಿಕ್ಷಕರ ಕರ್ತವ್ಯ ಆಗಿದೆ. ಮಕ್ಕಳ ಮನದಲ್ಲಿ ಸಂಸ್ಕಾರಯುತ ಭಾವನೆಗಳನ್ನು ರೂಪಿಸಿ, ಅವುಗಳನ್ನು ಕಾರ್ಯಗತಕ್ಕೆ ತರುವಂತೆ ಮಾಡುವ ಹೊಣೆಗಾರಿಕೆಯು ನಿಮ್ಮಲ್ಲಿದ್ದು, ದೈಹಿಕ ಶಿಕ್ಷಕರು ಇತ್ತ ಗಮನ ಹರಿಸಬೇಕು ಎಂದರು. ನಾಡಗೀತೆ ಹಾಗೂ ರಾಷ್ಟ್ರ ಗೀತೆ ಕೇವಲ ಹಾಡುವುದಲ್ಲ, ಅವುಗಳನ್ನು ಹಾಡುವಾಗ ಇಂತಿಷ್ಟು ಸಮಯ ಎಂಬುದು ನಿಗದಿಯಾಗಿದೆ ಅದನ್ನು ಆ ಸಮಯದಲ್ಲಿ ಹಾಡಿಸುವ ಅತಿ ಮುಖ್ಯ ಜವಾಬ್ದಾರಿ ಅವರದಾಗಿದೆ. ಪಠ್ಯದ ಕಲಿಕೆಗೆ ತರಹ ಚಟುವಟಿಕೆಗಳು ಎಷ್ಟು ಮುಖ್ಯವೋ, ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಶಾಲೆಗಳಲ್ಲಿ ಅಷ್ಟೇ ಮುಖ್ಯ ಎಂದರು.
| ReplyReply allForwardYou can’t react with an emoji to a large group |