ಶಿವಮೊಗ್ಗ: ಭದ್ರಾ ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ಬರುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಮೂಲಕ ಇಂದು ಸಂಜೆ 2 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಯಿತು.

186 ಅಡಿ ಗರಿಷ್ಠ ಮಟ್ಟದ ಜಲಾಶಯಲ್ಲಿ ಪ್ರಸ್ತುತ 174.4 ಅಡಿ ನೀರಿದ್ದು,. ಜುಲೈ ತಿಂಗಳು ಪೂರ್ತಿ ಮಳೆ ಇರುವುದರಿಂದ ಯಾವುದೇ ಸಮಯದಲ್ಲಿ ಜಲಾಶಯ ಗರಿಷ್ಠ ಮಟ್ಟಕ್ಕೆ ತಲುಪುವ ಸಾಧ್ಯತೆ ಇದ್ದು ಮುಂಜಾಗ್ರತಾ ಕ್ರಮವಾಗಿ ನೀರನ್ನು ಹೊರ ಬಿಡಲಾಗುತ್ತಿದೆ.

71.53 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 57.63 ಟಿಎಂಸಿ ನೀರಿದೆ. ಈಗಾಗಲೇ ವಿದ್ಯುತ್ ಉತ್ಪಾದನಾ ಘಟಕದ ಮೂಲಕ 2 ಸಾವಿರ, ರಿವರ್ ಸ್ಲೈಸ್ ಮೂಲಕ 200 ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ.