ಶಿವಮೊಗ್ಗ : ತಂಬಾಕು ನಿಯಂತ್ರಣ ಕೋಶದ ವತಿಯಿಂದ ಜುರಂದು ಶಿವಮೊಗ್ಗ ನಗರದ ಗಾಡಿಕೊಪ್ಪ ಹಾಗೂ ಆಲ್ಕೊಳ

ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಿಸುವವರ ವಿರುದ್ಧ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 23 ಪ್ರಕರಣಗಳನ್ನು ದಾಖಲಿಸಿ, ಸ್ಥಳದಲ್ಲೇ ರೂ. 3500 ದಂಡವನ್ನು ಸಂಗ್ರಹಿಸಲಾಯಿತು.


ಈ ಸಂದರ್ಭದಲ್ಲಿ ತಂಬಾಕು ಮಾರಾಟಗಾರರಿಗೆ ಹಾಗು ಸಾರ್ವಜನಿಕರಿಗೆ ತಂಬಾಕು ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು. ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ

ಜಿಲ್ಲಾ ಸಲಹೆಗಾರರಾದ ಹೇಮಂತರಾಜ್ ಅರಸ್, ಸಾಮಾಜಿಕ ಕಾರ್ಯಕರ್ತರಾದ ರವಿರಾಜ್ ಜಿ.ಕೆ., ಡಿಇಓ ಪ್ರವೀಣ್ ಹಾಗೂ Police ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.