ಹೊಳೆಹೊನ್ನೂರು: ಗಣಪತಿ ಬಿಡುವ ವೇಳೆ ನೀರಿನಲ್ಲಿ ಮುಳುಗಿ ಬಾಲಕ (೧೦) ಮೃತಪಟ್ಟ ಘಟನೆ ಕುರುಬರ ವಿಠಲಾಪುರದಲ್ಲಿ ಸೋಮವಾರ ನಡೆದಿದೆ.

ಇಟ್ಟಿಗೆಹಳ್ಳಿಯ ಕುಶಾಲ್ (೧೦) ಮೃತ ಬಾಲಕ. ಕುರುಬರ ವಿಠಲಾಪುರದ ಬೀದಿಯ ಪುಟಾಣಿ ಮಕ್ಕಳು ಮಣ್ಣು ಬಳಸಿ ತಾವೇ ಸ್ವತಃ ಗಣಪನ ಮೂರ್ತಿ ತಯಾರು ಮಾಡಿ ಪೂಜೆ ಸಲ್ಲಿಸಿದ್ದರು. ಸೋಮವಾರ ಸಂಜೆ ವೇಳೆಗೆ ಗಣಪನನ್ನು ಭದ್ರಾ ನಾಲೆಗೆ ವಿಸರ್ಜನೆ ಮಾಡುವಾಗ ಅವಘಡ ನಡೆದಿದೆ.

ಪಾಲಕರಿಗೆ ತಿಳಿಸದೆ ಮೂರು ಮಕ್ಕಳು ನಾಲೆಗೆ ತೆರಳಿದ್ದಾರೆ ಎನ್ನಲಾಗುತ್ತಿದ್ದು. ನಾಲೆಯಲ್ಲಿ ಗಣಪತಿ ಬಿಡುವಾಗ ಆಯಾತಪ್ಪಿದ ಬಾಲಕ

ಕುಶಾಲ್ ನಾಲೆಗೆ ಬಿದ್ದಿದ್ದಾನೆ ಎನ್ನಲಾಗುತ್ತಿದೆ. ಸ್ಥಳೀಯರು ನಾಲೆಯಲ್ಲಿ ಹುಡುಕಾಡಿ ಶವ ಹೋರ ತೆಗೆದಿದ್ದಾರೆ. ಇಟ್ಟಿಗೆಹಳ್ಳಿಯಲ್ಲಿ ಬಾಲಕ ಕುಶಾಲ್ನ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.