ಶಿವಮೊಗ್ಗ : ಅಕ್ಟೋಬರ್ ೦೬ : ಮುಂದಿನ ಕೆಲವು ದಶಕಗಳ ದೂರದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ರಾಜ್ಯದಲ್ಲಿ ಬರಬಹುದಾದ ವಿದ್ಯುತ್ಕೊರತೆಯನ್ನು ನೀಗಿಸಿ, ಸಮರ್ಪಕವಾಗಿ ವಿದ್ಯುತ್ನ್ನು ಸರಬರಾಜುಗೊಳಿಸಲು ೨೦೦೦ಕೋಟಿ ರೂ.ಗಳ ವೆಚ್ಚದಲ್ಲಿ ಪಂಪ್ಡ್ಸ್ಟೋರೇಜ್ನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ಅವರು ಹೇಳಿದರು.
ಅವರು ಇಂದು ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಹರಿಯುವ ನದಿಗೆ ಯಾವುದೇ ಅಡತಡೆ ಮಾಡದಂತೆ ಈಗಿರುವ ನೀರನ್ನು ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಂದಾಜು ೨೦೦೦ಮೆ.ವ್ಯಾ. ವಿದ್ಯುತನ್ನು ಉತ್ಪಾದಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಉದ್ದೇಶಿತ ಶರಾವತಿ ಪಂಪ್ಡ್ಸ್ಟೋರೇಜ್ನ್ನು ನಿರ್ಮಿಸುವಲ್ಲಿ ಪರಿಸರವಾದಿಗಳು ಸೇರಿದಂತೆ ಅನೇಕ ಜನರ ವಿರೋಧವಿರುವುದನ್ನು ತಿಳಿಯಲಾಗಿದೆ. ಈ ವಿಷಯದ ಕುರಿತಂತೆ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಅಂತೆಯೇ ಸ್ಥಳೀಯರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವರಿಗೆ ಪರಿಸರ ನಾಶವಾಗದಿರುವ ಹಾಗೂ ಯಾರಿಗೂ ತೊಂದರೆ ಆಗದಿರುವ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಅಲ್ಲದೇ ಈ ಯೋಜನೆಗೆ ಬಳಸಿಕೊಳ್ಳಲಾಗುತ್ತಿರುವ ೧೨೦ಎಕರೆ ಭೂಪ್ರದೇಶದಲ್ಲಿನ ಅರಣ್ಯದಲ್ಲಿ ಹಾದು ಹೋಗಲಿರುವ ಪೈಪ್ಲೈನ್ಮೇಲ್ಭಾಗದಲ್ಲಿ ನೈಸರ್ಗಿಕವಾಗಿ ಗಿಡಗಳನ್ನು ಬೆಳೆಸಲಾಗುವುದು ಎಂದರು.

ಕೇಂದ್ರ ಪರಿಸರ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ, ಯೋಜನೆಯನ್ನು ಆರಂಭಿಸಲಾಗುವುದು ಎಂದ ಅವರು, ಪ್ರಸ್ತುತ ಉತ್ಪಾದನೆಯಾಗುತ್ತಿರುವ ವಿದ್ಯುತ್೧೦೦೦ಮೆ.ವ್ಯಾ. ವಿದ್ಯುತ್ಉತ್ಪಾದನೆಯಾಗುತ್ತಿದೆ. ಈ ಯೋಜನೆಯ ಅನುಷ್ಠಾನದಿಂದ ಸುಮಾರು ೩೦೦೦ಮೆ.ವ್ಯಾ. ವಿದ್ಯುತ್ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ ಎಂದರು.
ಇದರೊಂದಿಗೆ ಅತ್ಯಂತ ಕಡಿಮೆ ವೆಚ್ಚದ ಸೋಲಾರ್ವಿದ್ಯುತ್ನ್ನು ಬಳಸಿಕೊಳ್ಳಲಾಗುತ್ತಿದೆ. ಅಲ್ಲದೇ ಜನರಿಗೆ ಸಕಾಲದಲ್ಲಿ ವಿದ್ಯುತ್ಸರಬರಾಜು ಮಾಡುವುದು ಈ ಯೋಜನೆಯ ಉದ್ದೇಶ. ಈ ಸಂದರ್ಭದಲ್ಲಿ ಕಡಿತಲೆಯಾಗುವ ಮರಗಳಿಗೆ ಪರ್ಯಾಯವಾಗಿ ಮರಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ. ಇದರಿಂದಾಗಿ ಪರಿಸರದ ಮೇಲೆ ಯಾವುದೇ ಹಾನಿಯಾಗಲಾರದು. ಅಲ್ಲದೇ ಯಾವುದೇ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದಿಲ್ಲ ಎಂದವರು ತಿಳಿಸಿದ್ದಾರೆ.