ಶಿವಮೊಗ್ಗ,ನ.29:
ಶಿವಮೊಗ್ಗ ಅನುಪಿನಕಟ್ಟೆಯಲ್ಲಿರುವ ಶ್ರೀ ರಾಮಕೃಷ್ಣ ಗುರುಕುಲ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ನ. 30ರ ನಾಳೆ ಬೆಳಿಗ್ಗೆ 10:00ಗೆ ಜ್ಞಾನ ವಿಜ್ಞಾನ ಹಾಗೂ ಸೃಜನಶೀಲ ದಿನಾಚರಣೆ ಯನ್ನು ಆಯೋಜಿಸಲಾಗಿದೆ.

ಶಿವಮೊಗ್ಗದ ತೃಪ್ತಿ ಕ್ಲಿನಿಕ್ ನ ಕಿಡ್ನಿ ಹಾಗೂ ಮೂತ್ರ ಕೋಶ ಶಸ್ತ್ರ ಚಿಕಿತ್ಸಕರಾದ ಡಾ. ಎಸ್. ಚಂದ್ರಶೇಖರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಸಂಸ್ಥೆಯ ಅಧ್ಯಕ್ಷ ಡಾ. ಡಿ. ಆರ್. ನಾಗೇಶ್ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶೋಭಾ ವೆಂಕಟರಮಣ ಅವರು ಪ್ರಾಸ್ತಾವಿಕವಾದ ವಿವರಣೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಚಾಲಕರಾದ ಎಚ್. ಕೆ. ಅರುಣ್ ಹಾಗೂ ಕೆ.ಡಿ. ಶರತ್ ಮತ್ತು ಶಿಕ್ಷಕ ವೃಂದ, ಮಕ್ಕಳು ಹಾಗೂ ಪೋಷಕರು ಭಾಗವಹಿಸಲಿದ್ದಾರೆ.

ಪಠ್ಯ ವಿಷಯಗಳಿಗೆ ಸಂಬಂಧಪಟ್ಟಂತೆ ವಿಜ್ಞಾನ, ಗಣಿತ, ಸಮಾಜ ಹಾಗೂ ಭಾಷೆಯ ಮಾಡಲ್ ಪ್ರದರ್ಶನಗಳೊಂದಿಗೆ ಚಿತ್ರಕಲೆ, ಅಕ್ಷರ ಬರಹ ಸೇರಿದಂತೆ 2100 ಕ್ಕೂ ಹೆಚ್ಚು ಮಾಡೆಲ್ ಗಳು ಪ್ರದರ್ಶನವಾಗಲಿವೆ.