ಶಿವಮೊಗ್ಗ, ಮಾ.13:
ಶಿವಮೊಗ್ಗ ಜಿಲ್ಲೆಯಾದ್ಯಂತ ನೂರಾರು ವಿದ್ಯಾರ್ಥಿ ನಿಲಯಗಳು
ಆಸ್ಪತ್ರೆಗಳು ಹಾಗೂ ಶಾಲೆಗಳ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ಶಾಲೆಗಳಲ್ಲಿ ಸಾವಿರಾರು ಬಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಬಂದಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರವೇ ಊಟ ಮತ್ತು ವಸತಿಯನ್ನು ಕಲ್ಪಿಸುತ್ತಾ ಬರುತ್ತಿದೆ. ಆದರೆ ಇತ್ತೀಚಿನ ದಿನಮಾನಗಳಲ್ಲಿ ಇರಾನ್ ಮತ್ತು ಇಸ್ರೇಲ್ ದೇಶಗಳ ನಡುವೆ ನಡೆಯುತ್ತಿರುವ ಯುದ್ಧ ದಿಂದ ಗ್ಯಾಸ್ ಸಿಲಿಂಡರ್ ಗಳ ಅಭಾವ ಹೆಚ್ಚಾಗಿದ್ದು ಹಾಸ್ಟೆಲ್ ಗಳಿಗೆ , ಶಾಲೆಗಳಿಗೆ, ಮತ್ತು ಆಸ್ಪತ್ರೆ ಗಳಿಗೆ ಯಾವುದೇ ರೀತಿಯ ತೊಂದರೆ ಗಳಾಗದಂತೆ ಸಮರ್ಪಕವಾಗಿ ಪೂರೈಕೆಮಾಡಬೇಕು ಎಂದು ಎನ್ ಎಸ್ ಯು ಐ ಇಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಸಮರ್ಪಕವಾಗಿ ಗ್ಯಾಸ್ ಒದಗಿಸದಿದ್ದರೆ ವಿದ್ಯಾರ್ಥಿಗಳಿಗೆ ನಾಗರಿಕರಿಗೇ ಸಾಕಷ್ಟು ತೊಂದರೆಗಳಾಗುವ ಸಾದ್ಯತೆ ಇದೆ , ಹಾಸ್ಟೆಲ್
ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷೆಗಳು ಪ್ರಾರಂಭವಾಗಿರುವುದರಿಂದ ವಿದ್ಯಾರ್ಥಿಗಳು ಬಹಳ ಆತಂಕದ

ಪರಿಸ್ಥಿತಿಯಲ್ಲಿದ್ದಾರೆ. ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಆಗುತ್ತಿರುವ ಆತಂಕವನ್ನು ದೂರ ಮಾಡಬೇಕು ಶಿವಮೊಗ್ಗ
ಜಿಲ್ಲೆಯ ವಿದ್ಯಾರ್ಥಿ ನಿಲಯಗಳಿಗೆ ಶಾಲೆಗಳಿಗೆ ಆಸ್ಪತ್ರೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ
ಗ್ಯಾಸ್ ಸಿಲೆಂಡರ್ ಗಳನ್ನು ಪೂರೈಕೆ ಮಾಡಲು ಸಂಬಂಧಪಟ್ಟ ಇಲಾಖೆಗಳಿಗೆ ಅಗತ್ಯ ಕ್ರಮಗಳನ್ನು
ಕೈಗೊಳ್ಳುವಂತೆ ಸೂಚಿಸಬೇಕು ಎಂದು ಮನವಿ ಮಾಡಿತು. ಈ ಸಂದರ್ಭದಲ್ಲಿ

ಎನ್ ಎಸ್ ಯು ಐ ನ ಜಿಲ್ಲಾ ಅಧ್ಯಕ್ಷರಾದ ವಿಜಯ್ ಕುಮಾರ್ ಕಾರ್ಯಾದ್ಯಕ್ಷರಾದ ರವಿಕುಮಾರ್, ನಗರ ಉಪಾಧ್ಯಕ್ಷರಾದ ಆದಿತ್ಯ, ಸುಭಾನ್ , ಶ್ರೀಕಾಂತ್, ಆಕಾಶ್, ಲೋಹಿತ್ ಕುಮಾರ್, ಪ್ರಮೋದ್, ಪ್ರಭು,ಜೀವನ್,ಯೂಸೂವ್, ದರ್ಶನ, ಸಾದುಲ್ಲ ದೀಪಕ್,ಮದನ್,ಭರತ್,ಗಣೇಶ ಮತ್ತು ಎನ್ ಎಸ್ ಯು ಐ ನ ಪದಾಧಿಕಾರಿಗಳು ಹಾಜರಿದ್ದರು.