ಶಿವಮೊಗ್ಗ, ಏಪ್ರಿಲ್ 21 : ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯವು 35ನೇಯ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಪ್ರಮಾಣ ಪತ್ರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ


ದಂಡ ಶುಲ್ಕವಿಲ್ಲದೇ ಅರ್ಜಿ ಸಲ್ಲಿಸಲು ಏ. 24, ದಂಡ ಶುಲ್ಕ ರೂ.100/-ರೊಂದಿಗೆ ಅರ್ಜಿ ಸಲ್ಲಿಸಲು ಏ. 26 ಹಾಗೂ ದಂಡ ಶುಲ್ಕ ರೂ. 200/- ರೊಂದಿಗೆ ಅರ್ಜಿ ಸಲ್ಲಿಸಲು ಏ. 27 ಕೊನೆಯ ದಿನಾಂಕವಾಗಿದ್ದು, ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.