ಶಿವಮೊಗ್ಗ ಜೂ. 5:
ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಶೇಕಡಾ 50 ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸರ್ಕಾರವು ಸಾರ್ವಜನಿಕರಿಗೆ ಸುವರ್ಣಾವಕಾಶ ಕಲ್ಪಿಸಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಬಿ. ಶಿರೋಳ್ಕರ್ ತಿಳಿಸಿದ್ದಾರೆ.
ಈ ರಿಯಾಯಿತಿಯು ನಿರ್ದಿಷ್ಟ ಅವಧಿಯ ಪ್ರಕರಣಗಳಿಗೆ ಮಾತ್ರ ಅನ್ವಯಿಸಲಿದೆ.

1991 ರಿಂದ 2022 ರ ಒಳಗಾಗಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳಿಗೆ ಮಾತ್ರ ಈ 50% ದಂಡ ಪಾವತಿ ರಿಯಾಯಿತಿ ಅನ್ವಯವಾಗುತ್ತದೆ.
ಶಿವಮೊಗ್ಗ ಜಿಲ್ಲೆಯ ಬಾಕಿ ಪ್ರಕರಣಗಳು: ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಸದ್ಯ ಈ ಅವಧಿಗೆ ಸಂಬಂಧಿಸಿದ ಒಟ್ಟು 790 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ.

ದಂಡ ಪಾವತಿಯ ಅವಧಿ: ಅರ್ಹ ವಾಹನ ಮಾಲೀಕರು ದಿನಾಂಕ: 21-06-2026 ರಿಂದ 10-07-2026 ರೊಳಗೆ ಈ ರಿಯಾಯಿತಿಯನ್ನು ಬಳಸಿಕೊಂಡು ದಂಡ ಪಾವತಿಸಿ, ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳಬಹುದಾಗಿದೆ.
ವಾಹನ ಮಾಲೀಕರು ಈ ನಿಗದಿತ ಅವಧಿಯೊಳಗೆ ರಿಯಾಯಿತಿಯ ಲಾಭವನ್ನು ಪಡೆದುಕೊಂಡು ಸಹಕರಿಸಬೇಕಾಗಿ ಅವರು ಕೋರಿದ್ದಾರೆ.