ಮಹಾನಗರ ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಗೌಡ ಅವರೊಂದಿಗೆ ಸಾರ್ವಜನಿಕ ಮುಖಾಮುಖಿ ಕಾರ್ಯಕ್ರಮವನ್ನು ಇದೇ ತಿಂಗಳ 17ರ ಬುಧವಾರ ಬೆಳಗ್ಗೆ 11ಗಂಟೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯು ಆಯೋಜಿಸಿದೆ.
ಆಯುಕ್ತರಾದ ಕೆ.ಮಾಯಣ್ಣ ಗೌಡ ಅವರೊಂದಿಗೆ ಮಹಾನಗರ ಪಾಲಿಕೆಯ ಪ್ರಮುಖ ಅಧಿಕಾರಿಗಳು ಕೂಡ ಈ ಮುಖಾಮುಖಿಯಲ್ಲಿ ಪಾಲ್ಗೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ನಾಗರಿಕರ ಪ್ರಶ್ನೆಗಳಿಗೆ ಆಯುಕ್ತರು ಉತ್ತರಿಸಲಿದ್ದಾರೆ.

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಸುಮಾರು ಮೂರು ವರ್ಷ ಕಳೆದಿದೆ. ಈ ಅವಧಿಯಲ್ಲಿ ನಗರದ ಜನರ ಕುಂದುಕೊರತೆ ಪರಿಹರಿಸಲು ಪಾಲಿಕೆ ಆಡಳಿತ ಶಕ್ತಿ ಮೀರಿ ಶ್ರಮಿಸುತ್ತಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಪಾಲಿಕೆ ನಡುವೆ ಸೇತುವೆ ಆಗುವ ಕಾರ್ಯಕ್ರಮವೇ ಈ ಮುಖಾಮುಖಿ.

ವೈಯಕ್ತಿಕವಲ್ಲದ ಸಾರ್ವಜನಿಕವಾದ ಸಮಸ್ಯೆಗಳನ್ನು ಸಂಘಕ್ಕೆ ಕಳಿಸಬೇಕು. ಈ ಸಮಸ್ಯೆಗಳಿಗೆ ಆಯುಕ್ತರು ಪರಿಹರ ಸೂಚಿಸಲಿದ್ದಾರೆ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ನಗರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಬರೆದುಕಳಿಸಬಹುದು. ಪ್ರಶ್ನೆಗಳನ್ನು ಕಳಿಸಬೇಕಾದ ವಾಟ್ಸಪ್ ನಂ. 9448138183, 8073502892, 9538172845