ಶಿವಮೊಗ್ಗ : ಜುಲೈ ೨೮ :: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIಖ) ಪ್ರಕ್ರಿಯೆಯ ಅವಧಿಯನ್ನು ಆಗಸ್ಟ್ ೮ರವರೆಗೆ ವಿಸ್ತರಿಸಿದ್ದು, ಅರ್ಹ ಮತದಾರರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಆಗಸ್ಟ್ ೮ರ ಕೊನೆಯ ದಿನದವರೆಗೂ ಬಿಎಲ್ಒ (ಃಐಔ) ಮನೆಮನೆ ಭೇಟಿಗೆ ನೀಡಿ ಮಾಹಿತಿ ಸಂಗ್ರಹಿಸುವರು. ಆಗಸ್ಟ್ ೧೭ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ನಂತರ ಸೆಪ್ಟೆಂಬರ್ ೧೬ ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಧಿ ಇರುತ್ತದೆ. ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಅಕ್ಟೋಬರ್ ೧೫ರೊಳಗಾಗಿ ವಿಲೇವಾರಿ ಮಾಡಲಾಗುವುದು. ಅಕ್ಟೋಬರ್ ೧೯ರಂದು ಮತದಾರರ ಪಟ್ಟಿಯ ಅಂತಿಮ ಪಟ್ಟಿ ಪ್ರಕಟಗೊಳ್ಳಿದೆ ಎಂದವರು ನುಡಿದರು.

ಜಿಲ್ಲೆಯಲ್ಲಿ ಒಟ್ಟು ೧೫,೧೯,೪೫೯ ಅರ್ಹ ಮತದಾರರಿದ್ದು, ಈ ಪೈಕಿ ೧೨,೯೩,೮೪೪ಮತದಾರರನ್ನು ಡಿಜಿಟಲೀಕರಿಸಿ ಶೇ.೮೫.೧೫ರಷ್ಟು ಪ್ರಗತಿ ಸಾಧಿಸಲಾಗಿದೆ. ಇವರಲ್ಲಿ ೬೧೯೬ಮತದಾರರು ಆನ್ಲೈನ್ಮೂಲಕ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಭಾಗವಹಿಸಿದ್ದಾರೆ. ಇನ್ನೂ ೬೯೬೦೩ಮಂದಿ ಮತದಾರರು ನೋಂದಣಿ ಕಾರ್ಯದಲ್ಲಿ ಭಾಗವಹಿಸಿರುವುದರಿಂದ ಹಿಂದುಳಿದಿದ್ದಾರೆ. ಅವರನ್ನು ಸದರಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿತರಾದ ೧೭೯೩ ಮತಗಟ್ಟೆ ಅಧಿಕಾರಿಗಳು ಮತದಾರರ ಮನೆಮನೆಗೆ ತೆರಳಿ ಅವರಿಂದ ಮಾಹಿತಿ ಪಡೆದು ಅಪ್ಲೋಡ್ಮಾಡಲಿದ್ದಾರೆ ಎಂದವರು ನುಡಿದರು.

ಮತದಾರರ ಪಟ್ಟಿಯಲ್ಲಿ ಗೈರಾಗಿರುವವರು, ಮರಣ ಹೊಂದಿದವರು, ಸ್ಥಳಾಂತರಗೊಂಡಿರುವ ಕುಟುಂಬಗಳು ಹಾಗೂ ಎರೆಡೆರೆಡು ಕಡೆಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ಉಳಿಸಿಕೊಂಡಿರುವವರು ಸೇರಿದಂತೆ ಒಟ್ಟು ೧೫೬೦೧೨ಜನರನ್ನು ಗುರುತಿಸಲಾಗಿದೆ. ಆ ಪೈಕಿ ೪೩,೮೪೫ಮತದಾರರು ಮರಣ ಹೊಂದಿರುವುದನ್ನು ಗುರುತಿಸಲಾಗಿದೆ. ಗುರುತಿಸಲಾಗದ ಅಥವಾ ಗೈರಾಗಿರುವ ೨೩,೭೩೮ಮಂದಿಯನ್ನು ಗುರುತಿಸಲಾಗಿದೆ. ಜಿಲ್ಲೆಯ ಒಟ್ಟು ಮತದಾರರಲ್ಲಿ ೭೨,೫೪೪ಮತದಾರರು ಸ್ಥಳಾಂತರಗೊಂಡಿರುವುದನ್ನು ಗುರುತಿಸಲಾಗಿದೆ. ಉಳಿದ ಹಾಗೂ ಈವರೆಗೆ ಮಾಹಿತಿಯನ್ನು ನೀಡದಿರುವವರ ಮನೆಮನೆಗೆ ಮತಗಟ್ಟೆ ಅಧಿಕಾರಿಗಳು ತೆರಳಿ ಮಾಹಿತಿ ಪಡೆಯುವ ಕಾರ್ಯವನ್ನು ಮುಂದುವರೆಸಲಿದ್ದಾರೆ ಎಂದರು.
ಈ ಎಲ್ಲಾ ಮಾಹಿತಿಯನ್ನು ರಾಷ್ಟ್ರೀಯ ಮತ್ತು ಸ್ಥಳೀಯ ರಾಜಕೀಯ ಪಕ್ಷಗಳ ಮುಖಂಡರಿಗೆ ಈ ಕುರಿತು ಮಾಹಿತಿ ನೀಡಲಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ಸಹಕರಿಸುವಂತೆ ತಾಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿ ಎರೆಡೆರೆಡು ಸಭೆಗಳನ್ನು ನಡೆಸಿ, ಮಾಹಿತಿ ನೀಡಲಾಗಿದೆ ಎಂದವರು ನುಡಿದರು.

ಪ್ರಸಕ್ತ ಮುಂಗಾರಿನಲ್ಲಿ ವಾಡಿಕೆ ಪ್ರಮಾಣದ ಮಳೆಗಿಂತ ಶೇ.೪೪ರಷ್ಟು ಮಳೆಯ ಕೊರತೆ ಇದೆ. ಈವರೆಗೆ ಜಿಲ್ಲೆಯಲ್ಲಿ ಶೇ. ೨೮ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಜಿಲ್ಲೆಯ ಪ್ರಧಾನ ಬೆಳೆಗಳಲ್ಲಿ ಮೆಕ್ಕೆಜೋಳ ಮತ್ತು ಭತ್ತ ಪ್ರಮುಖ ಬೆಳಗಳಾಗಿವೆ. ಭತ್ತದ ಬೆಳೆ ಬಿತ್ತನೆಗೆ ಆಗಸ್ಟ್ಕೊನೆಯ ವಾರದವರೆಗೆ ಮಳೆ ಆಗುವ ಆಶಾಭಾವನೆ ಹೊಂದಲಾಗಿದೆ. ಈಗಾಗಲೇ ಬಿತ್ತನೆಯಾಗಿರುವ ಮೆಕ್ಕೆಜೋಳ ನಿರೀಕ್ಷಿತ ಪ್ರಮಾಣದಲ್ಲಿ ಮೊಳಕೆಯಾಗದಿರುವುದು, ಹುಲುಸಾಗಿ ಬೆಳೆ ಬಾರದಿರುವುದು ಕಂಡುಬಂದಿದೆ ಎಂದ ಅವರು, ಜಿಲ್ಲೆಯಲ್ಲಿ ರೈತರ ಅಗತ್ಯಕ್ಕೆ ಸಾಕಾಗುವಷ್ಟು ರಸಗೊಬ್ಬರ ದಾಸ್ತಾನು ಇದೆ. ಕೊರತೆಯಾದಲ್ಲಿ ಸಕಾಲದಲ್ಲಿ ಗೊಬ್ಬರ ಒದಗಿಸಲು ಕ್ರಮ ವಹಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಒಟ್ಟು ೨೮೦ಮಳೆ ಮಾಪನ ಕೇಂದ್ರಗಳಿವೆ. ೨೦೨೬ರ ಜನವರಿ ಮಾಹೆಯ ವೇಳೆಗೆ ೨೦೮ ಕೇಂದ್ರಗಳು ದುರಸ್ತಿಯಲ್ಲಿದ್ದು, ೭೨ಕೇಂದ್ರಗಳು ಸುಸ್ಥಿತಿಯಲ್ಲಿದ್ದವು. ಇವುಗಳಲ್ಲಿ ಈಗಾಗಲೇ ೧೮೫ಕೇಂದ್ರಗಳನ್ನು ಸರಿಪಡಿಸಲಾಗಿದೆ. ಉಳಿದವರುಗಳನ್ನು ಮುಂದಿನ ೧೫ದಿನಗಳಲ್ಲಿ ಸರಿಪಡಿಸಲು ಕ್ರಮಕೈಗೊಳ್ಳಲಾಗುವುದು. ಈ ಸಂಬಂಧ ಜುಲೈ ೨೫ರಂದು ಮಾನ್ಯ ಮುಖ್ಯಮಂತ್ರಿಗಳು ಚಿತ್ರದುರ್ಗದಲ್ಲಿ ಕರೆಯಲಾಗಿದ್ದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ಅಲ್ಲದೇ ಕಳೆದ ಏಪ್ರಿಲ್ಮತ್ತು ಮೇ ಮಾಹೆಯಲ್ಲಿ ಬಿದ್ದ ಆಲಿಕಲ್ಲು ಮಳೆಯಿಂದಾಗಿ ಹಾನಿಗೊಳಗಾಗಿದ್ದ ತೋಟಗಾರಿಕೆ ಬೆಳೆಗಾರರಿಗೆ ಪರಿಹಾರಧನವನ್ನು ಬಿಡುಗಡೆ ಮಾಡುವಂತೆ ಹಾಗೂ ವಿಶೇಷ ಪ್ಯಾಕೇಜ್ಘೋಷಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ. ಉಳಿದಂತೆ ಮಳೆಯಿಂದ ಹಾನಿಗೊಳಗಾದ ಸಂತ್ರಸ್ಥ ಕುಟುಂಬಗಳಿಗೆ ಪರಿಹಾರಧನ ಒದಗಿಸಲಾಗಿದೆ ಎಂದರು.
ಜಿಲ್ಲೆಯ ಸೊರಬ ತಾಲೂಕಿನ ಒಂದು ಗ್ರಾಮದಲ್ಲಿನ ನಿವಾಸಿಗಳಿಗೆ ಟ್ಯಾಂಕರ್ಮೂಲಕ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ. ಅಲ್ಲದೇ ಜಿಲ್ಲೆಯ ವಿವಿಧ ತಾಲೂಕುಗಳ ಆಯ್ದ ೩೭೩ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸಮಸ್ಯೆ ತಾತ್ಕಾಲಿಕ ಪರಿಹಾರ ಕ್ರಮವಾಗಿ ಸ್ಥಳೀಯವಾಗಿರುವ ಕೊಳವೆಬಾವಿಗಳನ್ನು ಬಾಡಿಗೆ ಮೂಲಕ ಪಡೆದು, ನೀರನ್ನು ಒದಗಿಸಲಾಗುತ್ತಿದೆ ಎಂದವರು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ವಿ. ಮತ್ತು ಚುನಾವಣಾ ತಹಶೀಲ್ದಾರ್ ಶ್ರೀಮತಿ ಮಂಜುಳಾ ಹೆಗಡಾಳ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂಧಿಗಳು ಉಪಸ್ಥಿತರಿದ್ದರು.