ಶಿವಮೊಗ್ಗ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘದಿಂದ ಆ.10 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಾದ್ಯಂತ ಎಲ್ಲಾ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಒಂದು ದಿನದ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಘಟಕ ಅಧ್ಯಕ್ಷೆ ಬಿ.ಪ್ರೇಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.