ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ಇವರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ “ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಲಾಗಿದ್ದು, ಮಾ.20ರಂದು ಬೆಂಗಳೂರಿನಲ್ಲಿ ನಡೆಯ ಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಹಕಾರ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ.
ಎಂ.ಬಿ.ಚನ್ನವೀರಪ್ಪ ಇವರು ೧೯೯೪-೯೫ ನೇ ಸಾಲಿನಿಂದ ಸಹಕಾರ ಕ್ಷೇತ್ರದಲ್ಲಿ ಅವಿರತವಾಗಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದು, ದಿ ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್ ಲಿ. ಶಿಕಾರಿಪುರ ಇದರಲ್ಲಿ ಕಳೆದ ೨೮ ವರ್ಷಗಳಿಂದ ನಿರಂತರವಾಗಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರಿನಲ್ಲಿ ೭ ವರ್ಷಗಳ ಕಾಲ ನಿರ್ದೇಶಕರಾಗಿ, ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದಲ್ಲಿ ೫ ವರ್ಷಗಳ ಕಾಲ ನಿರ್ದೇಶಕರಾಗಿ, ಟಿ.ಎ.ಪಿ.ಸಿ,ಎಂ.ಎಸ್ ಶಿಕಾರಿಪುರದಲ್ಲಿ ೧೦ ವರ್ಷಗಳ ಕಾಲ ನಿರ್ದೇಶಕಾಗಿಯೂ ಸೇವೆ ಸಲ್ಲಿಸಿದ್ದಾರೆ.
ಎಂ.ಬಿ. ಚನ್ನವೀರಪ್ಪ ಇವರಿಗೆ ಸಂದ ಈ ಪುರಸ್ಕಾರವು ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಸಂದ ಗೌರವವಾಗಿದ್ದು, ಬ್ಯಾಂಕಿನ ಆಡಳಿತ ಮಂಡಳಿ, ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಜಿಲ್ಲೆಯ ಎಲ್ಲಾ ಸಹಕಾರಿ ಸಂಸ್ಥೆಗಳ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.